top of page

ಗ್ರಾಪಂ ಉಪಚುನಾವಣೆ : ಮದ್ಯ ಮಾರಾಟ ನಿಷೇಧ

  • Writer: newsnowvijayanagar
    newsnowvijayanagar
  • May 22
  • 1 min read

ವಿಜಯನಗರ, ಮೇ.22) : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಪಂ ಹಾಗೂ ಕೂಡ್ಲಿಗಿ ತಾಲೂಕಿನ ಗುಂಡುಮುಣುಗು ಗ್ರಾಪಂಗಳಲ್ಲಿ ತೆರವಾದ ಸ್ಥಾನಕ್ಕೆ ಮೇ.25 ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ 1993 ರ ಪ್ರಕರಣ 308ಎಸಿ ರಂತೆ ಮೇ.23 ರ ಸಂಜೆ 5 ಗಂಟೆಯಿಂದ ಮೇ.25 ರ ಸಂಜೆ 5 ಗಂಟೆವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಮತ್ತು ಮದ್ಯದಂಗಡಿಯನ್ನು ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Posts

See All
ಕಡಲಬಾಳು ಗ್ರಾಮದಲ್ಲಿ ಪೆಟ್ರೋಲಿಯಂ ರಿಟೈಲ್ಔಟ್‌ಲೇಟ್ ಸ್ಥಾಪನೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಹೊಸಪೇಟೆ (ವಿಜಯನಗರ) ಡಿ.03. ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಕಲಬುರಗಿ ಇವರು ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹಗರಿಬೊಮ್ಮನಹಳ್ಳಿ ಹೋಬಳಿಯ...

 
 
 

コメント


bottom of page