top of page

ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ; ಎನ್.ಮಲ್ಲಿಕಾರ್ಜುನ ಮೆಟ್ರಿ

  • Writer: newsnowvijayanagar
    newsnowvijayanagar
  • Mar 1
  • 1 min read

ree

ವಿಜಯನಗರ(ಹೊಸಪೇಟೆ) :ನಗರದ ವಿಜಯನಗರ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ 2025 ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಡಾ. ಎಸ್.ಎಸ್.ಸೋಮಶೇಖರ ಅವರು ಪ್ರಸ್ತುತ ವಿಜ್ಞಾನ ಕ್ಷೇತ್ರದಲ್ಲಿ ಕ್ವಾಂಟಮ್ ಮೆಕ್ಯಾನಿಕ್ಸ್ ಮತ್ತು ತಂತ್ರಜ್ಞಾನಗಳ ಪ್ರಾಮುಖ್ಯತೆ ಮತ್ತು ಈ ವರ್ಷವನ್ನು ವಿಶ್ವಾದ್ಯಂತ ಕ್ವಾಂಟಮ್ ವಿಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನಗಳ ವರ್ಷವೆಂದು ಏಕೆ?ಆಚರಿಸಲಾಗುತ್ತದೆ ಎಂಬುದನ್ನು ವಿವರಿಸಿದರು. ಮಧುಕರ್ ಸೊಪ್ಪಿನ್ ಸ್ವಾಗತಿಸಿದರು.ಎನ್. ಮಲ್ಲಿಕಾರ್ಜುನ ಮೆಟ್ರಿ ಅಧ್ಯಕ್ಷರು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಪ್ರಾಂಶುಪಾಲ ಡಾ. ಎಂ.ಪ್ರಭುಗೌಡ ಅವರು ವಿಜ್ಞಾನ ದಿನದ ಪ್ರತಿಜ್ಞಾ ವಿಧಿಯನ್ನು ಓದಿದರು ಮತ್ತು ಅವರು ನಮ್ಮ ದೇಶವನ್ನು ವಿಕಸಿತ ಭಾರತವನ್ನಾಗಿ ಮಾಡಲು ಜಾಗತಿಕ ಸವಾಲುಗಳನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳಿಗೆ ಹೇಗೆ ತರಬೇತಿ ನೀಡ ಬೇಕು ಎನ್ನುವ ವಿಷಯದ ಬಗ್ಗೆ ಮಾತನಾಡಿದರು ಆರ್ಯಧಾಮ ಕಾರ್ಯದರ್ಶಿ ಸಮಾರಂಭವನ್ನು ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಅಜಿತ್ ನಾರಾಯಣ ಮತ್ತು ಪುಷ್ಪಾ.ವಿಜ್ಞಾನ ವಿದ್ಯಾರ್ಥಿಗಳು ಮತ್ತು ವಿಜ್ಞಾನ ವಿಭಾಗದ ಸಿಬ್ಬಂದಿ ವರ್ಗ ಸಮಾರಂಭದಲ್ಲಿ ಉಪಸ್ಥಿತರಿದ್ದರು.


Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Comments


bottom of page